ಡ್ರಗ್ಸ್ ದಂಧೆಗೆ ಬ್ರೇಕ್ ಹಾಕಲು ಕಠಿಣ ಕ್ರಮ ! ಪ್ರತಿ ಶಾಲಾ ಕಾಲೇಜಿಗೂ ಬರ್ತಾರೆ ಪೊಲೀಸ್!
ಬೆಂಗಳೂರು: ನಿನ್ನೆ ವಿಧಾನಸಭೆ ಕಲಾಪದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿಯ ಬಗ್ಗೆ ಮಾಜಿ ಶಿಕ್ಷಣ ಸಚಿವರು ಮತ್ತು ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸರ್ಕಾರವನ್ನು ಪ್ರಶ್ನಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಲೇಜುಗಳಲ್ಲಿ ಡ್ರಗ್ಸ್ ತಡೆಗಟ್ಟಲು ಕೈಗೊಂಡಿರುವ ಈ ಮಹತ್ವದ ಕ್ರಮದ ಬಗ್ಗೆ ವಿವರಿಸಿದ್ದಾರೆ. ಪ್ರತಿ ಕಾಲೇಜಿಗೂ ಹೋಗಿ ವಿದ್ಯಾರ್ಥಿಗಳ ಪರೀಕ್ಷೆ ಮಾಡಿ ಅಂತ ಪೊಲೀಸರಿಗೆ ಸೂಚಿಸಿದ್ದೇವೆ ಕಳೆದ ತಿಂಗಳು ಈ ಆದೇಶ ಜಾರಿಯಾಗಿದೆ ಎಂದು ಹೇಳಿದ್ದಾರೆ. ಕೇವಲ ಸಣ್ಣ ಪುಟ್ಟ ಡ್ರಗ್ ಪೆಡ್ಲರ್ಗಳನ್ನು ಬಂಧಿಸುವುದರಿಂದ ಪ್ರಯೋಜನವಿಲ್ಲ. ಡ್ರಗ್ಸ್ ಮಾಫಿಯಾದ ಹಿಂದಿರುವ 'ಕಿಂಗ್ಪಿನ್'ಗಳನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಶಾಲಾ-ಕಾಲೇಜುಗಳ ಸಮೀಪ ಡ್ರಗ್ಸ್ ಜಾಲ ಸಕ್ರಿಯವಾಗಿದ್ದು, ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ. ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ವಿಳಂಬವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಪೊಲೀಸರು ಇನ್ನು ಮುಂದೆ ಎಲ್ಲಾ ಶಾಲಾ ಕಾಲೇಜುಗಳ ಸುತ್ತ ಮುತ್ತ ಪರಿಶೀಲನೆ ನಡೆಸಲು ಆಗ್ರಹಿಸಲಾಗಿದೆ.
ಇತರೆ ಸುದ್ದಿಗಳು