ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 08-04-2026

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

ಬೆಂಗಳೂರು : ಕರ್ನಾಟಕದಲ್ಲಿ ತೆರಿಗೆ ಪಾವತಿಸದೆ ಅನ್ಯರಾಜ್ಯಗಳ ನೋಂದಣಿ ಸಂಖ್ಯೆಯ ವಾಹನಗಳನ್ನು ಬಳಸುತ್ತಿದ್ದ ಮಾಲೀಕರಿಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಿದೆ. ಕಳೆದ ಐದು ವರ್ಷಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯ ಮೂಲಕ ಒಟ್ಟು 62.4 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 54.6 ಕೋಟಿ ರೂ. ದಂಡ ವಿಧಿಸಲಾಗಿದೆ. ಕಡಿಮೆ ತೆರಿಗೆಯ ಆಸೆಗೆ ಪಾಂಡಿಚೇರಿ, ಗೋವಾದಂತಹ ರಾಜ್ಯಗಳಲ್ಲಿ ಐಷಾರಾಮಿ ವಾಹನ ಖರೀದಿಸಿ, ಎನ್‌ಒಸಿ ಪಡೆದೂ ಇಲ್ಲಿ ತೆರಿಗೆ ಕಟ್ಟದ 5,200ಕ್ಕೂ ಹೆಚ್ಚು ವಾಹನಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಡಿಮೆ ಹಣ ನೀಡಿ ನೆರೆರಾಜ್ಯಳಲ್ಲಿ ವಾಹನಗಳನ್ನು ಖರೀದಿಸಿ ತೆರಿಗೆ ಕಟ್ಟದೇ ಓಡಾಡುತ್ತಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಸಿ ಮುಟ್ಟಿಸಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದ ವಿವಿಧೆಡೆ ವಿಶೇಷ ಕಾರ್ಯಾಚರಣೆಗಳ ಮೂಲಕ ಬರೋಬ್ಬರಿ 62.4 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಈ ಪೈಕಿ, ಬೆಂಗಳೂರಿನಲ್ಲಿ 54.6 ಕೋಟಿ ರೂ. ದಂಡ ಸಂಗ್ರಹವಾಗಿದೆ.ಸಾರಿಗೆ ಇಲಾಖೆ ನೀಡಿರುವ ಅಂಕಿ- ಅಂಶಗಳ ಪ್ರಕಾರ, ರಾಜ್ಯಾದ್ಯಂತ 773 ದ್ವಿಚಕ್ರ ವಾಹನ ಮಾಲೀಕರು ಹಾಗೂ 4,504 ಕಾರು ಮಾಲೀಕರ ವಿರುದ್ಧ ತೆರಿಗೆ ವಂಚನೆ ಸಂಬಂಧ ಪ್ರಕರಣ ದಾಖಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಶೇ.85ರಷ್ಟು ಪ್ರಕರಣಗಳು ಪತ್ತೆಯಾಗಿದ್ದು, ನಗರದ 747 ದ್ವಿಚಕ್ರ ವಾಹನ ಮಾಲೀಕರು ಹಾಗೂ 3,739 ಕಾರು ಮಾಲೀಕರು ಕರ್ನಾಟಕಕ್ಕೆ ತೆರಿಗೆ ಪಾವತಿಸದೇ ನೆರೆರಾಜ್ಯದ ವಾಹನಗಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.ತೆರಿಗೆ ಉಳಿಸಲು ಅನ್ಯರಾಜ್ಯದ ವಾಹನ ಖರೀದಿ ಮಾಡಿರುವುದು ಬೆಳಕಿಗೆ ಬಂದಿದೆ . ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಸಾರಿಗೆ ಅಧಿಕಾರಿಯೊಬ್ಬರು, ಬೇರೆ ರಾಜ್ಯಗಳಲ್ಲಿ ತೆರಿಗೆ ಕಡಿಮೆ ಇರುವುದರಿಂದ ಐಷಾರಾಮಿ ಕಾರು, ಬೈಕ್‌ಗಳನ್ನು ಖರೀದಿಸಲಾಗುತ್ತಿದೆ. ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅನೇಕರು ತೆರಿಗೆ ಉಳಿಸುವ ಸಲುವಾಗಿ ಅನ್ಯರಾಜ್ಯದ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ, ಎಂದು ಮಾಹಿತಿ ನೀಡಿದ್ದಾರೆ. ಬೇರೆ ರಾಜ್ಯಗಳ ವಾಹನಗಳನ್ನು ಖರೀದಿಸಿದ ಬಳಿಕ, ಎನ್‌ಒಸಿ ಪಡೆದರೂ ಕೆಲ ಮಾಲೀಕರು ಕರ್ನಾಟಕದಲ್ಲಿ ತೆರಿಗೆ ಪಾವತಿಸದೇ ವಾಹನಗಳನ್ನು ಬಳಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿಲ್ಲಿ, ಕೇರಳ, ಪಾಂಡಿಚೇರಿ, ಗೋವಾ ಸೇರಿದಂತೆ ಬೇರೆ ಬೇರೆ ಭಾಗದ ವಾಹನಗಳು ಹೆಚ್ಚಾಗಿ ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿಯುತ್ತಿರುವುದು ಕಾರ್ಯಾಚರಣೆ ವೇಳೆ ಬಯಲಾಗಿದೆ. 2021-22 ರಲ್ಲಿ 232 ದ್ವಿಚಕ್ರ ವಾಹನಗಳು, 424 ಕಾರು ಮಾಲೀಕರು ನಿಯಮ ಉಲ್ಲಂಘಿಸಿದ್ದರು. ಈ ಪೈಕಿ 226 ದ್ವಿಚಕ್ರ ವಾಹನಗಳು, 395 ಕಾರುಗಳು ನಗರ ವ್ಯಾಪ್ತಿಗೆ ಸೇರಿವೆ. 2025-26ರಲ್ಲಿ 164 ದ್ವಿಚಕ್ರ ವಾಹನ ಮಾಲೀಕರು, 2,278 ಕಾರು ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ವೇಳೆ ಇಲಾಖೆ 41.4 ಕೋಟಿ ರೂ. ತೆರಿಗೆ ಮತ್ತು ದಂಡ ಸಂಗ್ರಹಿಸಿತ್ತು. ಇದರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲೇ 34.5 ಕೋಟಿ ರೂ. ಆದಾಯ ಹರಿದುಬಂದಿತ್ತು.

ಇತರೆ ಸುದ್ದಿಗಳು

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ

Views : 1909+

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ?

Views : 2139+

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 4602+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 4780+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 4801+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 4880+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 7359+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 7840+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 7878+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 13074+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 13197+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 13473+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 13493+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 27461+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 30499+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 30519+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 30548+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 33552+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 33557+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 33679+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 33773+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 33804+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 39350+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 39439+