ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹುಣಸೂರು ತಾಲ್ಲೂಕಿನ ಹನಗೋಡು ಮತ್ತು ಮುಳ್ಳೂರಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ
ವರದಿಗಾರರು : ಕೆಂಡೇಶ್ ಸೂರ್ಯ | ಸ್ಥಳ : ಹುಣಸೂರು | ದಿನಾಂಕ : 20-11-2025

ಹುಣಸೂರು ತಾಲ್ಲೂಕಿನ ಹನಗೋಡು ಮತ್ತು ಮುಳ್ಳೂರಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ

ಹುಣಸೂರು: ನವೆಂಬರ್ 19 – ಹನಗೋಡು ಮತ್ತು ಮುಳ್ಳೂರು ಗ್ರಾಮ ಪಂಚಾಯಿತಿಗಳಲ್ಲಿ “ಬದಲಾಗುತ್ತಿರುವ ಜಗತ್ತಿನಲ್ಲಿ ನೈರ್ಮಲ್ಯ” ಘೋಷವಾಕ್ಯದಡಿ ವಿಶ್ವ ಶೌಚಾಲಯ ದಿನಾಚರಣೆ ಜರಿಗಿತು. ಈ ಕಾರ್ಯಕ್ರಮವನ್ನು ಮೈಸೂರು ಜಿಲ್ಲಾ ಪಂಚಾಯಿತಿ, ಹುಣಸೂರು ತಾಲ್ಲೂಕು ಪಂಚಾಯಿತಿ ಹಾಗೂ ಐಟಿಸಿಎಂಎಸ್‌ಕೆ-ಔಟ್ ರೀಚ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಯಿತು. ಐಟಿಸಿಎಂಎಸ್‌ಕೆ-ಔಟ್ ರೀಚ್ ಸಂಸ್ಥೆಯ ತರಬೇತಿದಾರ ಜಿ.ಎಸ್. ಜಗದೀಶ ಹೇಳಿದ್ದಾರೆ, “ಭಾರತದಲ್ಲಿ ಜನಸಂಖ್ಯೆಯ ದ್ವಿತೀಯ ಸ್ಥಾನದಲ್ಲಿರುವುದರಿಂದ, ಶೌಚಾಲಯ ಮತ್ತು ನೈರ್ಮಲ್ಯ ಸಮಸ್ಯೆ ಅತ್ಯಂತ ತೀವ್ರವಾಗಿದೆ. ಈ ಕ್ಷೇತ್ರದಲ್ಲಿ ನಾವು ಇನ್ನೂ ಹೆಚ್ಚಿನ ಜಾಗೃತಿಯ ಅಗತ್ಯವಿದೆ.”

ಹನಗೋಡು ಪ್ರೌಢಶಾಲೆಯ ಮುಖ್ಯಶಿಕ್ಷಕ ಸಂತೋಷಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು, “ನಾವೆಲ್ಲರೂ ಶೌಚಾಲಯಗಳನ್ನು ಸ್ವಚ್ಛವಾಗಿ ಬಳಸುವ ಸಂಸ್ಕೃತಿಯನ್ನು ಬೆಳೆಸಿದರೆ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಇದು ಕೇವಲ ಸರ್ಕಾರದ ಕರ್ತವ್ಯವಲ್ಲ; ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ.” ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳು ಗ್ರಾಮದ ಬೀದಿಗಳಲ್ಲಿ ಶೌಚಾಲಯ ಬಳಕೆ, ಸ್ವಚ್ಛತೆ ಮತ್ತು ನೀರಿನ ಸಮರ್ಪಕ ಬಳಕೆ ಕುರಿತು ಘೋಷಣೆಗಳು ನೀಡಿದರು ಮತ್ತು ಬೀದಿ ನಾಟಕದ ಮೂಲಕ ಸಾರ್ವಜನಿಕರ ಮನಸ್ಸಿನಲ್ಲಿ ಶೌಚಾಲಯ ಬಳಕೆಯ ಮಹತ್ವವನ್ನು ಉದ್ದೀಪನ ಮಾಡಿದರು.

ಹನಗೋಡು ಗ್ರಾ.ಪಂ. ಅಧ್ಯಕ್ಷೆ ಸಂಗೀತ, ಮುಳ್ಳೂರು ಗ್ರಾ.ಪಂ. ಅಧ್ಯಕ್ಷೆ ದಿವ್ಯಅಶೋಕ, ಉಪಾಧ್ಯಕ್ಷ ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ 250 ಕ್ಕೂ ಹೆಚ್ಚು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಐಟಿಸಿಎಂಎಸ್‌ಕೆ-ಔಟ್ ರೀಚ್ ಸಂಸ್ಥೆಯ ಸಿಬ್ಬಂದಿ ಮತ್ತು ಸ್ಥಳೀಯ ಸಂಘಟನೆಗಳ ಸದಸ್ಯರು ಸಹ ಉಪಸ್ಥಿತರಿದ್ದರು. ವಿಶ್ವ ಶೌಚಾಲಯ ದಿನದ ಮುಖ್ಯ ಉದ್ದೇಶ ಬಯಲು ಮಲವಿಸರ್ಜನೆ ತಡೆಯುವುದು, ಸುರಕ್ಷಿತ ಶೌಚಾಲಯ ಮತ್ತು ಶುದ್ಧ ನೀರಿನ ಸೌಲಭ್ಯಗಳನ್ನು ಖಾತ್ರಿ ಮಾಡುವುದು. ಇದು ಸ್ವಚ್ಛ ಭಾರತ್ ಮಿಷನ್ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಅನುಷ್ಠಾನದಲ್ಲಿ ಪ್ರಮುಖ ದಿನವಾಗಿದೆ ಎಂದು ತಿಳಿಸಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+