ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹಾರ್ಮುಜ್ ಜಲಸಂಧಿ ದಾಟುವ ಹಡಗುಗಳಿಗೆ 2 ಮಿಲಿಯನ್ ಡಾಲರ್ ಟೋಲ್; ಭಾರತದಿಂದಲೂ ಹಣ ಕೀಳುತ್ತಾ ಇರಾನ್‌?
ವರದಿಗಾರರು : Jagadeesha BM | ಸ್ಥಳ : Bengaluru | ದಿನಾಂಕ : 23-03-2026

ಹಾರ್ಮುಜ್ ಜಲಸಂಧಿ ದಾಟುವ ಹಡಗುಗಳಿಗೆ 2 ಮಿಲಿಯನ್ ಡಾಲರ್ ಟೋಲ್; ಭಾರತದಿಂದಲೂ ಹಣ ಕೀಳುತ್ತಾ ಇರಾನ್‌?

ನೀನು ಚಾಪೆ ಕೆಳಗೆ ತೂರಿದರೆ ನಾನು ರಂಗೋಲಿ ಕೆಳಗೆ ತೂರುತ್ತೇನೆ ಎಂಬಂತೆ, ಹಾರ್ಮುಜ್‌ ಜಲಸಂಧಿ ತೆರೆಯಲು 48 ಗಂಟೆಗಳ ಡೆಡ್‌ಲೈನ್‌ ನೀಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ, ಇರಾನ್‌ ಮತ್ತೊಂದು ಶಾಕ್‌ ನೀಡಿದೆ. ಹಾರ್ಮುಜ್‌ ಜಲಸಂಧಿಯನ್ನು ಹಾದುಹೋಗುವ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ 2 ಮಿಲಿಯನ್‌ ಡಾಲರ್‌ ಟೋಲ್‌ ವಿಧಿಸಿದೆ. ಅಲ್ಲದೇ ತನ್ನ ವಿದ್ಯುತ್‌ ಘಟಕಗಳ ಮೇಲೆ ಅಮೆರಿಕ ಮತ್ತು ಇರಾನ್‌ ದಾಳಿ ಮಾಡಿದರೆ, ಹಾರ್ಮುಜ್‌ ಜಲಸಂಧಿಯನ್ನೇ ಮುಚ್ಚುವುದಾಗಿ ಇರಾನ್‌ ಎಚ್ಚರಿಸಿದೆ. ಇದರಿಂದ ಭಾರತದ ಮೇಲಾಗುವ ಪರಿಣಾಮವೇನು? ನೋಡೋಣ ಬನ್ನಿ.

ಟೆಹ್ರಾನ್‌: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಗುಂಡು, ಕ್ಷಿಪಣಿ, ಡ್ರೋನ್ ದಾಳಿಗಳ ಅಬ್ಬರದ ನಡುವೆ ಇದೀಗ ಜಾಗತಿಕ ಆರ್ಥಿಕತೆಯನ್ನೇ ಬುಡಮೇಲು ಮಾಡುವಂತಹ ಮತ್ತೊಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಯುದ್ಧದಲ್ಲಿ ಶತ್ರುಗಳನ್ನು ಮಣಿಸಲು ಬಗೆಬಗೆಯ ತಂತ್ರಗಳನ್ನು ಹೆಣೆಯುತ್ತಿರುವ ಇರಾನ್, ಇದೀಗ ಜಗತ್ತನ್ನೇ ಬೆಚ್ಚಿಬೀಳಿಸುವಂತಹ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ತನ್ನ ಭೌಗೋಳಿಕ ಅಸ್ತ್ರವನ್ನು ಪ್ರಯೋಗಿಸಿರುವ ಇರಾನ್‌, ಜಾಗತಿಕ ತೈಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಹೊಸ 'ಟೋಲ್' ನಿಯಮವನ್ನು ಜಾರಿಗೆ ತಂದಿದೆ.

ಹೌದು, ನೀವು ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಟೋಲ್ ಕಟ್ಟುವುದು ಸಾಮಾನ್ಯ. ಆದರೆ ಇರಾನ್‌, ಸಮುದ್ರ ಮಾರ್ಗದಲ್ಲಿ ಸಂಚರಿಸುವ ಹಡಗುಗಳಿಗೆ ಬರೋಬ್ಬರಿ 2 ಮಿಲಿಯನ್ ಡಾಲರ್, ಅಂದರೆ ಭಾರತೀಯ ರೂಪಾಯಿ ಲೆಕ್ಕದಲ್ಲಿ ಸುಮಾರು 16 ರಿಂದ 18 ಕೋಟಿ ರೂಪಾಯಿ ಟೋಲ್ ವಿಧಿಸಿದೆ. ಜಗತ್ತಿನ ಕಚ್ಚಾ ತೈಲ ಪೂರೈಕೆಯ ಶೇಕಡಾ 20ರಷ್ಟು, ಅಂದರೆ ಜಾಗತಿಕ ತೈಲದ ಐದನೇ ಒಂದು ಭಾಗ ಇದೇ ಹಾರ್ಮುಜ್ ಜಲಸಂಧಿಯ ಮೂಲಕವೇ ಹಾದುಹೋಗಬೇಕು. ಈ ನಿರ್ಣಾಯಕ ಜಲಮಾರ್ಗದ ಮೇಲೆ ತನ್ನ ಹಿಡಿತ ಸಾಧಿಸಿರುವ ಇರಾನ್, ಇದೀಗ ಕೆಲವು ನಿರ್ದಿಷ್ಟ ಹಡಗುಗಳು ಜಲಸಂಧಿ ದಾಟಲು 2 ಮಿಲಿಯನ್ ಡಾಲರ್ ಶುಲ್ಕ ಪಾವತಿಸಬೇಕು ಎಂದು ಫರ್ಮಾನು ಹೊರಡಿಸಿದೆ. ಇದರಿಂದ ಜಗತ್ತು ಅಕ್ಷರಶ: ಬೆಚ್ಚಿಬಿದ್ದಿದೆ. ಜಾಗತಿಕ ತೈಲ ಬಿಕ್ಕಟ್ಟು ಮತ್ತಷ್ಟು ಭೀಕರ ಆಗುವ ಸಾಧ್ಯತೆ ದಟ್ಟವಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+