ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 16-01-2026

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

ದೇಶಭಕ್ತಿಗೆ ಹೆಸರಾಗಿದ್ದ ದರ್ಭಾಂಗ ರಾಜಮನೆತನದ ಕೊಂಡಿಯೊಂದು ಕಳಚಿದೆ. ಈ ಮನೆತನದ ಕೊನೆಯ ಮಹಾರಾಣಿ 'ಕಾಮಸುಂದರಿ ದೇವಿ' ಅವರು ನಿಧನರಾಗಿದ್ದಾರೆ. ಅವರ ನಿಧನವು ದರ್ಭಾಂಗ ರಾಜಮನೆತನದ ಐತಿಹಾಸಿಕ ಕೊಡುಗೆಗಳನ್ನು ಮತ್ತೆ ಮುನ್ನೆಲೆಗೆ ತಂದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದರು. ಅವರ ನಿಧನದೊಂದಿಗೆ ಮಿಥಿಲಾಂಚಲ ಭಾಗದ ಪ್ರಸಿದ್ಧ ರಾಜಮನೆತನದ ಯುಗ ಅಂತ್ಯಗೊಂಡಂತಾಗಿದೆ.

ದೇಶಕ್ಕಾಗಿ 600 ಕೆ.ಜಿ ಚಿನ್ನ, 3 ವಿಮಾನಗಳನ್ನು ದಾನ ನೀಡಿದ್ದ ಮಹಾರಾಣಿ

1962ರ ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ, ಸರ್ಕಾರ ಯುದ್ಧದ ವೆಚ್ಚಕ್ಕಾಗಿ ನೆರವು ನೀಡುವಂತೆ ಮನವಿ ಮಾಡಿತ್ತು. ಆ ಮನವಿಗೆ ಸ್ಪಂದಿಸಿದ್ದ ಮಹಾರಾಣಿಯ ಕುಟುಂಬವು, ದರ್ಭಾಂಗದ ಇಂದ್ರಭವನ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ, ದೇಶದ ರಕ್ಷಣಾ ನಿಧಿಗೆ ಸುಮಾರು 15 ಮಣ (ಸುಮಾರು 600 ಕೆಜಿ ) ಚಿನ್ನವನ್ನು ದಾನವಾಗಿ ನೀಡಿತ್ತು. ಇದರ ಜತೆಗೆ, ಮೂರು ವಿಮಾನಗಳು ಮತ್ತು 90 ಎಕರೆ ಭೂಮಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದರು. ಅಂದು ಅವರು ನೀಡಿದ ಆ ಜಾಗವೇ ಇಂದು 'ದರ್ಭಾಂಗ ವಿಮಾನ ನಿಲ್ದಾಣ'ವಾಗಿ ಅಭಿವೃದ್ಧಿಪಡಿಸಲಾಗಿದೆ.

ಅಲ್ಲದೇ ಈ ಮನೆತನ ಹಲವಾರು ವಿಶ್ವವಿದ್ಯಾಲಯಗಳು, ಸಕ್ಕರೆ ಮತ್ತು ಕಾಗದದ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಕ್ಕೂ ಗಮನಾರ್ಹ ಕೊಡುಗೆಗಳನ್ನು ನೀಡಿದೆ.

ಕಾಮಸುಂದರಿ ದೇವಿ ಆಸ್ತಿಯ ವಿವರ:

1962ರಲ್ಲಿ, ಕೊನೆಯ ಮಹಾರಾಜ ಕಾಮೇಶ್ವರ ಸಿಂಗ್ ನಿಧನರಾದಾಗ, ದರ್ಭಾಂಗ ಮನೆತನದ ಸಂಪತ್ತು ಸುಮಾರು ₹2,000 ಕೋಟಿ ಎಂದು ಅಂದಾಜಿಸಲಾಗಿತ್ತು. ನಂತರದ ವರ್ಷಗಳಲ್ಲಿ, ಈ ಮನೆತನದ ಟ್ರಸ್ಟಿಗಳು ಈ ಅಪಾರ ಸಂಪತ್ತಿನ ಬಹುಭಾಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಸಂಪತ್ತು ಕ್ರಮೇಣ ಕ್ಷೀಣಿಸಿದೆ ಎಂದು ವರದಿಯಾಗಿದೆ.

ಇಂದು ಉಳಿದಿರುವ ಸಂಪತ್ತೆಷ್ಟು?

ಕುಟುಂಬದ ಪ್ರಸ್ತುತ ಸಂಪತ್ತಿನ ನಿಖರವಾದ ಅಂಕಿ ಅಂಶ ಲಭ್ಯವಿಲ್ಲ. ಆದರೆ 1962ರಲ್ಲಿ ಸುಮಾರು ₹2,000 ಕೋಟಿ ಮೌಲ್ಯದ ಈ ಮನೆತನದ ಆಸ್ತಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು ₹4 ಲಕ್ಷ ಕೋಟಿ ಇರಬಹುದು ಎಂದು 'ಇಂಡಿಯಾ ಟುಡೇ' ವರದಿ ಮಾಡಿದೆ. ಈ ಆಸ್ತಿಯಲ್ಲಿ 14 ದೊಡ್ಡ ಕಂಪನಿಗಳು, ಭಾರತ ಮತ್ತು ವಿದೇಶಗಳಲ್ಲಿರುವ ಬಂಗಲೆಗಳು, ಚಿನ್ನಾಭರಣ, ಭೂಮಿ ಮತ್ತು ಷೇರು ಮಾರುಕಟ್ಟೆಯಲ್ಲಿನ ಹೂಡಿಕೆಗಳು ಸೇರಿವೆ.

ಕಾಮಸುಂದರಿ ದೇವಿ ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಕ್ಕೂ ಅಪಾರ ಕೊಡುಗೆ ದರ್ಭಾಂಗ ರಾಜಮನೆತನ ಶಿಕ್ಷಣ ಮತ್ತು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಪ್ರಮುಖ ಪಾತ್ರ ವಹಿಸಿದೆ. ಲಲಿತ್ ನಾರಾಯಣ್ ಮಿಥಿಲಾ ವಿಶ್ವವಿದ್ಯಾಲಯವು ರಾಜಮನೆತನದ ಸಂಕೀರ್ಣದಲ್ಲಿದೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯ, ಕಲ್ಕತ್ತಾ ವಿಶ್ವವಿದ್ಯಾಲಯ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಪಟ್ನಾ ವಿಶ್ವವಿದ್ಯಾಲಯಗಳಿಗೆ ಈ ಕುಟುಂಬ ಅಪಾರ ಆರ್ಥಿಕ ನೆರವು ನೀಡಿದೆ. ದರ್ಭಾಂಗ ವೈದ್ಯಕೀಯ ಕಾಲೇಜು ಕೂಡ ಇದರ ಕೊಡುಗೆಗಳಲ್ಲಿ ಒಂದು.

ಇದಲ್ಲದೇ ಸಕ್ರಿ, ಲೋಹತ್, ರಾಯಮ್ ಮತ್ತು ಹಸನ್‌ಪುರದಲ್ಲಿ ಸಕ್ಕರೆ ಕಾರ್ಖಾನೆಗಳನ್ನು, ಹಯಾಘಾಟ್‌ನಲ್ಲಿ ಅಶೋಕ್ ಕಾಗದ ಕಾರ್ಖಾನೆ ಮತ್ತು ಸಮಷ್ಟಿಪುರದಲ್ಲಿ ರಾಮೇಶ್ವರ ಸೆಣಬಿನ ಕಾರ್ಖಾನೆ ಸ್ಥಾಪಿಸಿದ್ದರು. ಕಾಮಸುಂದರಿ ದೇವಿ ಎಂಟನೇ ವಯಸ್ಸಿನಲ್ಲಿ ವಿವಾಹ ಮಹಾರಾಣಿ ಕಾಮಸುಂದರಿ ದೇವಿ ಅವರು ಕಾಮೇಶ್ವರ ಸಿಂಗ್ ಅವರ ಮೂರನೇ ಪತ್ನಿ. 1932 ಅಕ್ಟೋಬರ್ 22, ರಂದು ಒಡಿಶಾದ ಮಧುಬನಿ ಜಿಲ್ಲೆಯಲ್ಲಿ ಜನಿಸಿದರು. ಎಂಟನೇ ವಯಸ್ಸಿನಲ್ಲಿ ಅವರು ವಿವಾಹವಾಗಿದ್ದರು. 1962ರಲ್ಲಿ ಮಹಾರಾಜ ಕಾಮೇಶ್ವರ ಸಿಂಗ್ ನಿಧನದನಂತರ 64 ವರ್ಷಗಳ ಕಾಲ ಒಂಟಿಯಾಗಿಯೇ (ವಿಧವೆ) ಜೀವನ ಸಾಗಿಸಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+