ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಧುರಂಧರ್ 2 ಎದುರು ಮಂಕಾದ ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಧುರಂಧರ್ 2 ಎದುರು ಮಂಕಾದ ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್

ಧುರಂಧರ್ 2 ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದ್ದು, ಪವನ್ ಕಲ್ಯಾಣ್ ಅಭಿನಯದ ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ಮೀರಿಸಿದೆ. ಧುರಂಧರ್ 2 ಮಂಗಳವಾರ 56 ಕೋಟಿ ಗಳಿಸಿದರೆ, ಉಸ್ತಾದ್ ಭಗತ್ ಸಿಂಗ್ ಕೇವಲ 1.5 ಕೋಟಿ ಗಳಿಸಿದೆ. ಪವನ್ ಕಲ್ಯಾಣ್ ಅವರ ಇತ್ತೀಚಿನ ಚಿತ್ರಗಳು ನಿರೀಕ್ಷೆ ಮೂಡಿಸದೆ ನಿರಾಸೆ ಮೂಡಿಸಿವೆ. ಧುರಂಧರ್ 2 ಸಿನಿಮಾ ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್​ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ಉಸ್ತಾದ್ ಭಗತ್ ಸಿಂಗ್ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ಧುರಂಧರ್ 2 ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಧುರಂಧರ್ 2 ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನೂ ಮೀರಿ ಧುರಂಧರ್ 2 ಸಿನಿಮಾ ಗೆಲುವು ಕಂಡಿದೆ. ಈ ಚಿತ್ರದ ಗಳಿಕೆ ಮಂಗಳವಾರ 56 ಕೋಟಿ ರೂಪಾಯಿ ಇದೆ. ತೆಲುಗು ಭಾಷೆಯಲ್ಲೇ ಚಿತ್ರ ಮೂರು ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಧುರಂಧರ್ 2 ಚಿತ್ರವು ಅನಾಯಾಸವಾಗಿ ಉಸ್ತಾದ್ ಭಗತ್ ಸಿಂಗ್ ಚಿತ್ರವನ್ನು ಮಣಿಸಿದೆ. ಪವನ್ ಚಿತ್ರ ಮಂಗಳವಾರ ಒಂದೂವರೆ ಕೋಟಿ ರೂಪಾಯಿ ಗಳಿಸಿದೆ ಎಂದು ವರದಿ ಆಗಿದೆ. ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಒಪ್ಪಿಕೊಂಡ ಚಿತ್ರಗಳನ್ನು ಮುಗಿಸಬೇಕಾದ ಅನಿವಾರ್ಯತೆ ಕಾರಣದಿಂದ ಆದಷ್ಟು ಪ್ರಯತ್ನಿಸಿ ಶೂಟ್ ಮುಗಿಸಿಕೊಟ್ಟರು. ಓಜಿ, ಹರಿ ಹರ ವೀರ ಮಲ್ಲು ಸಿನಿಮಾಗಳು ರಿಲೀಸ್ ಆಗಿ ಸೋತವು. ಈ ಸಾಲಿಗೆ ಉಸ್ತಾದ್ ಭಗತ್ ಸಿಂಗ್ ಕೂಡ ಸೇರ್ಪಡೆ ಆಗುತ್ತಿದೆ. ಪವನ್ ಕಲ್ಯಾಣ್​ಗೆ ಟಾಲಿವುಡ್​​​ನಲ್ಲಿ ಬಹುಬೇಡಿಕೆ ಇದೆ. ಅವರು ಅನೇಕ ಚಿತ್ರಗಳನ್ನು ಮಣಿಸಿದ್ದಾರೆ. ಆದರೆ, ಈಗ ಅವರು ಧುರಂಧರ್ 2 ಚಿತ್ರದ ಎದುರು ಮಂಡಿ ಊರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಪವನ್ ಚಿತ್ರಕ್ಕೆ ಈಗಾಗಲೇ ಸಾಕಷ್ಟು ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಹೀಗಾಗಿ, ಅವರ ಸಿನಿಮಾ ಮತ್ತೆ ಮೇಲಕ್ಕೆ ಏಳೋದು ಅನುಮಾನ ಎಂದೇ ಹೇಳಲಾಗುತ್ತಾ ಇದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 375+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 3425+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 3466+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 3523+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 3625+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 3673+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 3705+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 3749+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 3797+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 3810+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 3884+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 3944+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6165+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6227+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6278+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 6333+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 6495+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 6523+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 6653+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 6834+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9037+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9202+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9263+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 9435+